ಸಂಗೀತ, ಗಾಯನದೊಡನೆ ಭಾವಗೀತೆಗಳನ್ನು ಒದಗಿಸುವ ಅನೇಕ ಅಂತರ್ಜಾಲದ ತಾಣಗಳಿದ್ದರೂ ಸಹ ಕೇವಲ ಭಾವಗೀತೆಗಳ ಸಾಹಿತ್ಯಕ್ಕೆ ಮೀಸಲಾದ ತಾಣವಿರುವುದೇ? ತಿಳಿಯದು. ಆದರೆ ಎಷ್ಟೋ ಬಾರಿ ಇಲ್ಲಿ ಅಲೆಯುತ್ತ ಕವಿತೆಗಳ ಸಾಹಿತ್ಯಕ್ಕಾಗಿ ಅರಸಿದಾಗ ತೃಪ್ತಿಯಾಗುವಂತಹ ಫಲಿತಾಂಶ ನನಗಂತೂ ದಕ್ಕಿಲ್ಲ. ಆದ್ದರಿಂದಲೇ ಈ ಪುಟ್ಟ ಪ್ರಯತ್ನ. ಭಾವಗೀತೆಗಳ ಯಾವುದಾದರು ಸಾಲುಗಳು ಇಲ್ಲಿ ತಪ್ಪಾಗಿ ಬರೆಯಲ್ಪಟ್ಟಿದ್ದರೆ ತಿಳಿಸಿ, ಎಷ್ಟೋ ಗೀತೆಗಳು ರಚನಕಾರರ ಹೆಸರಿಲ್ಲದೆ ಹಾಗೆ ಬರೆಯಲ್ಪಟ್ಟಿವೆ, ತಿಳಿದಿದ್ದವರು ಅದನ್ನು ತಿದ್ದಬಹುದು. ಈ ಸಣ್ಣ ಪ್ರಯತ್ನದ ಬಗ್ಗೆ ನಿಮ್ಮ ಒಂದು ಚಿಕ್ಕ ಅಭಿಪ್ರಾಯವನ್ನು ತೇಲಿಬಿಟ್ಟರೆ ಮುದವೆನಿಸುವುದು.




Sunday 21 August 2011

ನಿತ್ಯೋತ್ಸವ / Nityotsava

ರಚನೆ; ಕೆ. ಸ್. ನಿಸಾರ್ ಅಹಮದ್ 

                           - ೧ -
ಜೋಗದ ಸಿರಿ ಬೆಳಕಿನಲ್ಲಿ, ತುಂಗೆಯ ತೆನೆ ಬಳುಕಿನಲ್ಲಿ,
ಸಹ್ಯಾದ್ರಿಯ ಲೋಹದದಿರ ಉತ್ತುಂಗದ ನಿಲುಕಿನಲ್ಲಿ,
ನಿತ್ಯ ಹರಿದ್ವರ್ಣವನದ ತೇಗ ಗಂಧ ತರುಗಳಲ್ಲಿ,
ನಿತ್ಯೋತ್ಸವ, ತಾಯಿ, ನಿತ್ಯೋತ್ಸವ, ನಿನಗೆ......

                          - ೨ -
ಇತಿಹಾಸದ ಹಿಮದಲ್ಲಿನ ಸಿಂಹಾಸನ ಮಾಲೆಯಲ್ಲಿ, 
ಗತ ಸಾಹಸ ಸಾರುತಿರುವ ಶಾಸನಗಳ ಸಾಲಿನಲ್ಲಿ,
ಓಲೆಗರಿಯ ಸಿರಿಗಳಲ್ಲಿ, ದೇಗುಲಗಳ ಭಿತ್ತಿಗಳಲಿ 
ನಿತ್ಯೋತ್ಸವ, ತಾಯಿ, ನಿತ್ಯೋತ್ಸವ, ನಿನಗೆ......

                         - ೩ - 
ಹಲವೆನ್ನದ ಹಿರಿಮೆಯೆ, ಕುಲವೆನ್ನದ ಗರಿಮೆಯೆ,
ಸದ್ವಿಕಾಸಶೀಲ ನುಡಿಯ ಲೋಕಾವೃತ ಸೀಮೆಯೆ,
ಈ ವತ್ಸರ ನಿರ್ಮತ್ಸರ ಮನದುದಾರ ಮಹಿಮೆಯೆ
ನಿತ್ಯೋತ್ಸವ, ತಾಯಿ, ನಿತ್ಯೋತ್ಸವ, ನಿನಗೆ......    

1 comment:

  1. ೧)ಹಲವೆನ್ನದ ಹಿರಿಮೆಯೆ,
    ೨)ಈ ವತ್ಸರ ನಿರ್ಮತ್ಸರ ಮನದುದಾರ ಮಹಿಮೆಯೆ
    ಈ ಎರಡು ಸಾಲಿನ ಅರ್ಥ ತಿಳಿಸುವಿರಾ?

    ReplyDelete