ನನ್ನ ಇನಿಯನ ನೆಲೆಯ ಬಲ್ಲೆಯೇನೆ?
ಹೇಗೆ ತಿಳಿಯಲಿ ಅದನು ಹೇಳೆ ನೀನೆ.
ಇರುವೆ ಸರಿಯುವ ಸದ್ದು,
ಮೊಗ್ಗು ಬಿರಿಯುವ ಸದ್ದು,
ಮಂಜು ಇಳಿಯುವ ಸದ್ದು ಕೇಳಬಲ್ಲ.
ನನ್ನ ಮೊರೆಯನು ಏಕೆ ಕೇಳಲೊಲ್ಲ.
ಗಿರಿಯ ಎತ್ತಲು ಬಲ್ಲ,
ಶರಧಿ ಬತ್ತಿಸಬಲ್ಲ,
ಗಾಳಿಗುಸಿರನೇ ಕಟ್ಟಿ ನಿಲಿಸಬಲ್ಲ.
ನನ್ನ ಸೆರೆಯನು ಏಕೆ ಬಿಡಿಸಲೊಲ್ಲ.
ನೀರು ಮುಗಿಲಾದವನು,
ಮುಗಿಲು ಮಳೆಯಾದವನು,
ಮಳೆ ಬಿತ್ತು ತೆನೆ ಎತ್ತು ತೂಗುವವನು.
ನಲ್ಲೆ ಅಳಲನು ಏಕೆ ತಿಳಿಯನವನು.
    
                                                      - ಎನ್. ಎಸ್. ಲಕ್ಷ್ಮಿನಾರಾಯಣ ಭಟ್ಟ
 
No comments:
Post a Comment